Mysore
26
overcast clouds

Social Media

ಗುರುವಾರ, 07 ಮೇ 2026
Light
Dark

ಫೈನಾನ್ಸ್‌ ಕಿರುಕುಳ | ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ; ಸಚಿವ ಚಲುವರಾಯಸ್ವಾಮಿ

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೈನಾನ್ಸ್‌ ಸಂಸ್ಥೆಗಳಿಗೆ ಕಾನೂನು ರೂಪಿಸಲಾಗುವುದು. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಖಚಿತ. ಮಂಡ್ಯದಲ್ಲೂ ಈ ಬಗ್ಗೆ ಎಸ್‌ಪಿ ಗೆ ನಿರ್ದೇಶನ ನೀಡಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್‌ಗಳ ಬಗ್ಗೆ ಜನರು ಜಾಗೃತರಾಗಬೇಕು. ಸರ್ಕರ ಪಿಎಲ್‌ಡಿ ಬ್ಯಾಂಕ್‌, ಸೊಸೈಟಿ ಹಾಗೂ ಇತರೆ ಬ್ಯಾಂಕ್‌ಗಳ ಮೂಲಕ ಬಡ್ಡಿ ರಹಿತ ಸಾಲ ನೀಡುತ್ತಿದೆ. ಹೀಗಾಗಿ ಮೈಕ್ರೋ ಫೈನಾನ್ಸ್‌ಗೆ ಹೋಗೋದನ್ನ ಜನರು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

 

 

 

 

 

Tags:
error: Content is protected !!