ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಈ ಸಂಬಂಧ ಪ್ರಕರಣದ ಮೂವರು ಆರೋಪಿಗಳಿಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್ ಮತ್ತು ಕುಟುಂಬಸ್ಥರಿಗೆ ಸಿಬಿಐ ನೋಟಿಸ್ ನೀಡಿದೆ. ಈ ಹಿಂದೆ ಚಂದ್ರಮೋಹನ್ ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ನಕಲಿ ಆಕೌಂಟ್ಗಳನ್ನು ಸೃಷ್ಠಿಮಾಡಿ 89 ಕೋಟಿ ರೂ ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದರು.
ಸಿಬಿಐ ಈಗಾಗಲೇ ಪ್ರಕರಣದ ಆರೋಪಿಗಳಾದ ಪರಶುರಾಮ್, ಸತ್ಯನಾರಾಯಣ ಇಟಕಾರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ.





