Mysore
30
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನವೋದ್ಯಮ ಸ್ಥಾಪನೆಯಲ್ಲಿ ಕರ್ನಾಟಕ ರಾಜ್ಯ ಅತ್ಯುನ್ನತ ಸ್ಥಾನದಲ್ಲಿದ್ದು, ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿಸುವ ಗುರಿ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯ ಸರ್ಕಾರದ ಹೊಸ ಕೈಗಾರಿಕೆ ನೀತಿಯೂ ಸುಮಾರು 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಅಕರ್ಷಿಸಲಿದೆ. ಸರ್ಕಾರದ 30ಕ್ಕೂ ಹೆಚ್ಚು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಠಿಗೊಳ್ಳಲಿದ್ದು, ಉದ್ದಿಮೆ ಪ್ರೋತ್ಸಾಹಿಸುವ ಸಲುವಾಗಿ ಏಕಕಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೈಗಾರಿಕಾ ಸಚಿವ ಎಂಬಿ ಪಾಟೀಲ್‌, ಕೇಂದ್ರ ಸಚಿವ ವಿ. ಸೋಮಣ್ಣ, ಕೇಂದ್ರದ ಮಾಜಿ ಸಚಿವ ಶಶಿ ತರೂರ್‌ ಸೇರಿದಂತೆ ಇನ್ನಿತರ ಸಚಿವರು ಶಾಸಕರು ಪಾಲ್ಗೊಂಡಿದ್ದರು.

Tags:
error: Content is protected !!