Mysore
28
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ರಾಜ್ಯದಲ್ಲಿ ಮುಂದಿನ ಐದು ದಿನ ಸುಡು ಸುಡುವ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚಳಿಗಾಲ ಮುಗಿದು ಬೇಸಿಗೆಗಾಲ ಶುರುವಾಗಿದೆ. ಅತ್ತ ಚಳಿ ಚಳಿ ಎನ್ನುತ್ತಿದ್ದ ಜನರೂ ಕೂಡ ಈಗ ಇಷ್ಟೊಂದು ಸೆಖೆ ಎನ್ನುತ್ತಿದ್ದಾರೆ.

ಕೆಲ ಜಿಲ್ಲೆಗಳಲ್ಲಿ ಮನೆಯಿಂದ ಹೊರಗೆ ಕಾಲಿಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬೆನ್ನಲ್ಲೇ ಹವಾಮಾನ ಇಲಾಖೆ ಶಾಕಿಂಗ್‌ ಮಾಹಿತಿಯೊಂದನ್ನು ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಫೆಬ್ರವರಿ.24ರವರೆಗೂ ಒಣ ಹವೆ ಮುಂದುವರಿಯಲಿದ್ದು, ಮುಂದಿನ ಐದು ದಿನಗಳಲ್ಲಿ ಈ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ.

ಮುಂದಿನ ಐದು ದಿನಗಳಲ್ಲಿ ರಾಜ್ಯದಲ್ಲಿ ಇನ್ನಷ್ಟು ತಾಪಮಾನ ಏರಿಕೆಯಾಗುವ ಸಾಧ್ಯತೆಯಿದ್ದು, ಅದರಲ್ಲೂ ಮುಂದಿನ 48 ಗಂಟೆಗಳಲ್ಲಿ ಈಗಿರುವ ತಾಪಮಾನಕ್ಕಿಂತ 2 ರಿಂದ 3 ಡಿಗ್ರಿ ಗರಿಷ್ಠ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ರಾಜ್ಯದ ಬಹುತೇಕ ಕಡೆ 34 ಡಿಗ್ರಿ ಸೆಲ್ಸಿಯಸ್‌ನಷ್ಟು ಗರಿಷ್ಠ ತಾಪಮಾನ ತಲುಪಿದ್ದು, ಕಲಬುರ್ಗಿಯಲ್ಲಿ ಕಳೆದ 24 ಗಂಟೆಯಲ್ಲಿ 37 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ವರದಿಯಾಗಿದೆ.

Tags:
error: Content is protected !!