Mysore
25
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಲೋಕಾಯುಕ್ತದಲ್ಲಿ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ರಿಯಾಕ್ಷನ್‌

ಹುಬ್ಬಳ್ಳಿ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯೆ ನೀಡಿದ್ದು, ಇದು ನಿರೀಕ್ಷಿತ ತೀರ್ಪು ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್‌ ಚಿಟ್‌ ಸಿಗುತ್ತೆ ಎಂದು ಮೊದಲೇ ಗೊತ್ತಿತ್ತು. ಅದಕ್ಕಾಗಿಯೇ ನಾವು ಸಿಬಿಐ ತನಿಖೆಗೆ ಆಗ್ರಹಿಸಿದ್ದೆವು ಎಂದರು.

ಮೈಸೂರು ಮುಡಾ ಪ್ರಕರಣದಲ್ಲಿ ನಿರೀಕ್ಷೆಯಂತೆ ಸಿಎಂಗೆ ಕ್ಲೀನ್‌ಚಿಟ್‌ ಸಿಕ್ಕಿದೆ. ಲೋಕಾಯುಕ್ತದಲ್ಲಿ ಅಧಿಕಾರಿಗಳ ಪೋಸ್ಟಿಂಗ್‌ ಮಾಡುವುದು ಸಿಎಂ ಕೈಯಲ್ಲೇ ಇರುತ್ತದೆ. ಇದನ್ನು ಲೋಕಾಯುಕ್ತ ಪೊಲೀಸರಿಂದ ತನಿಖೆ ಮಾಡಿದ್ರೆ ಇದನ್ನು ಮುಚ್ಚಿ ಹಾಕುತ್ತಾರೆ ಎಂದು ಈ ಮೊದಲೇ ಹೇಳಿದ್ದೇ, ಈಗ ಅದೇ ಪರಿಸ್ಥಿತಿ ಆಗಿದೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾತ್ರೋರಾತ್ರಿ ಅಧಿಕಾರಿಗಳನ್ನು ಯಾರೆಲ್ಲಾ ಭೇಟಿಯಾಗಿ ಬಂದಿದ್ದಾರೆ ಅನ್ನೋದು ಎಲ್ಲವೂ ಗೊತ್ತಿದೆ. ಇದೇನೂ ಆಶ್ಚರ್ಯಕರ ಸಂಗತಿ ಏನೂ ಅಲ್ಲ. ನಿಷ್ಪಕ್ಷಪಾತ ತನಿಖೆಯಾಗಬೇಕಾದರೆ ನೇರವಾಗಿ ಸಿಬಿಐ ತನಿಖೆ ಮಾಡಿಸಬೇಕು. ಆವಾಗ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು.

Tags:
error: Content is protected !!