Mysore
25
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ದೂರು ದಾಖಲು

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆ ರ್‌ ದಾಖಲಾಗಿದೆ.

ಇತ್ತೀಚೆಗೆ ನಡೆದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡುವಾಗ ಮುಸಲ್ಮಾನರ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮೈಸೂರು ಯುವ ಕಾಂಗ್ರೆಸ್‌ ಅಧ್ಯಕ್ಷ ಸೈಬರ್‌ ಅಬ್ರರ್‌ ಅವರು ಉದಯಗಿರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಉದಯಗಿರಿ ಪೊಲೀಸ್‌ ಠಾಣೆಯ ಪೊಲೀಸರು ಈ ದೂರಿನ ಅನ್ವಯ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ BNS 196 ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

 

Tags:
error: Content is protected !!