Mysore
25
overcast clouds

Social Media

ಶುಕ್ರವಾರ, 12 ಜೂನ್ 2026
Light
Dark

ಮಹೇಶ್‌ ಜೋಶಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಎಸ್‌.ಬಸವರಾಜು

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸಹೋದ್ಯೊಗಿಗಳ ಮೇಲೆ ಸುಳ್ಳು ದೂರು ದಾಖಲಿಸಿ, ಮಾನಸಿಕ ಕಿರುಕುಳ ನೀಡಿದ್ದಕ್ಕೆ ನ್ಯಾಯಾಲಯ ದಂಡ ವಿಧಿಸಿದ್ದು, ಕೂಡಲೇ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನಪದ ಮತ್ತು ಬೀದಿ ನಾಟಕ ಕಲಾತಂಡಗಳ ಒಕ್ಕೂಟದ ಅಧ್ಯಕ್ಷ ಬಸವರಾಜು.ಎಸ್ ಒತ್ತಾಯಿಸಿದರು.

ಇಂದು (ಫೆ.25) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹೇಶ್ ಜೋಶಿ ಉದ್ದಟತನ, ಸವಾರ್ಧಿಕಾರಿ ಧೋರಣೆ, ಕನ್ನಡ ನೆಲ, ಜಲ ಭಾಷೆಗಳಿಗೆ ಗೌರವ ತರುವಂತಹ ಎಳ್ಳಷ್ಟು ಕೆಲಸ ಮಾಡದೇ, ಕನ್ನಡ ಭಾಷೆ, ಸಾಹಿತ್ಯಕ್ಕೆ ಅಗೌರವ ತೋರುವವರಾಗಿದ್ದಾರೆ ಎಂದು ದೂಡಿದರು.

ಇದಕ್ಕೆ ಸಾಕ್ಷಿಯಾಗಿ ಅವರ ವಿರುದ್ಧ ನ್ಯಾಯಾಲಯ ದಂಡ ವಿಧಿಸಿ ತೀರ್ಪು ಹೊರಡಿಸಿದೆ. ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಎಂ.ಆರ್.ಕುಮಾರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದರು. ಇದೀಗ ಅವರು ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರೂ ಸಹ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಅರ್ಹರು ಎಂದು ಹೇಳಿದರು.

ರಾಜೀನಾಮೆ ನೀಡಲು ಮಹೇಶ್ ಜೋಶಿ ಮತ್ತೇ ಉದ್ದಟನ ತೋರಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದರೆ, ಕೇಂದ್ರ ಕಸಾಪ ಕಛೇರಿ ಎದುರು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಎನ್.ಶೇಖರ್, ಪ್ರಧಾನ ಕಾರ್ಯದರ್ಶಿ ಟಿ.ಎಂ.ನಾಗರಾಜು, ಸದಸ್ಯ ಹೆಚ್.ಪಿ.ವೈರಮುಡಿ, ರೋಸ್ ಮೇರಿ ಇದ್ದರು.

 

Tags:
error: Content is protected !!