Mysore
29
few clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಕ್ಷೇತ್ರ ಪುನರ್‌ ವಿಂಗಡಣೆ; ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ: ಸಿಎಂ

ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ಆದಾಗ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂಬ ಅಮಿತ್‌ ಶಾ ಅವರ ಹೇಳಿಕೆ ನಂಬಲು ಅರ್ಹವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ ಅವರು, ಕೇಂದ್ರ ಸರ್ಕಾರವು ಕ್ಷೇತ್ರ ಪುನರ್‌ ವಿಂಗಡಣೆಗೆ ಅತ್ಯುತ್ಸಾಹ ತೋರಿಸುತ್ತಿದ್ದು, ಮರು ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುವುದು ಕಟ್ಟಿಟ್ಟಬುತ್ತಿ ಎನ್ನುವುದು ನಮಗೆ ಅರ್ಥವಾಗಿದೆ ಎಂದರು.

ಮರುವಿಂಗಡಣೆಯನ್ನು ಜನಸಂಖ್ಯೆ ಆಧಾರದ ಮೇಲೆ ಮಾಡಲಾಗುವುದೋ ಅಥವಾ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ ಎಂಬ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ ಎಂದರು.

ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಕಟ್ಟಿಟ್ಟಬುತ್ತಿ. ಇತ್ತೀಚಿನ ಜನಗಣತಿ ಮಾತ್ರ ಆಧರಿಸಿ ಮರುವಿಂಗಡಣೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 28ಕ್ಕೆ ಇಳಿಯುವ ಸಾಧ್ಯತೆ ಇದೆ. ಇದೇ ರೀತಿ ಆಂಧ್ರ ಪ್ರದೇಶದಲ್ಲಿ 42 ರಿಂದ 34, ಕೇರಳದಲ್ಲಿ 20 ರಿಂದ 12, ತಮಿಳುನಾಡಿನಲ್ಲಿ 39ರಿಂದ 31 ಕ್ಕೆ ಇಳಿಯಲಿದೆ.

ಹಾಗೆಯೇ ಉತ್ತರಪ್ರದೇಶದಲ್ಲಿ 80ರಿಂದ 91, ಬಿಹಾರದಲ್ಲಿ 40ರಿಂದ 50, ಮಧ್ಯಪ್ರದೇಶದಲ್ಲಿ 29ರಿಂದ 33ಕ್ಕೆ ಏರಿಕೆಯಾಗಿಲಿದೆ. ಇದನ್ನು ಅನ್ಯಾಯ ಎನ್ನದೇ ನ್ಯಾಯ ಎನ್ನಲು ಸಾಧ್ಯವೇ  ಎಂದು ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ, ಕ್ಷೇತ್ರ ಮರುವಿಂಗಡಣೆಗೆ ತೋರುತ್ತಿರುವ ಉತ್ಸಾಹ ನೋಡಿದರೆ ದಕ್ಷಿಣ ರಾಜ್ಯಗಳನ್ನು ಹತ್ತಿಕ್ಕುವ ದುರುದ್ದೇಶ ಕಾಣಿಸುತ್ತಿದೆ. ಈ ವಿಚಾರವಾಗಿ ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ಬಿಜೆಪಿಯ 17 ಸದಸ್ಯರು ಹಾಗೂ ಜೆಡಿಎಸ್‌ನ 2 ಸದಸ್ಯರು ಮಾತನಾಡದೇ ಜೀತದಾಳುಗಳಂತೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ ಎಂದು ಕಿಡಿಕಾರಿದರು.

ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ದಕ್ಷಿಣ ರಾಜ್ಯಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಅನ್ಯಾಯಕ್ಕೀಡಾಗಿರುವ ಎಲ್ಲ ರಾಜ್ಯಗಳ ಜೊತೆಗೂಡಿ ಸಂಘಟಿತವಾದ ಹೋರಾಟ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Tags:
error: Content is protected !!