Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಓದುಗರ ಪತ್ರ | ಫಲಿತಾಂಶವನ್ನು ಸವಾಲಾಗಿ ಸ್ವೀಕರಿಸಿ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿ ಗಳ ಬದುಕಿನ ಪ್ರಮುಖ ಘಟ್ಟಗಳಾಗಿವೆ. ಈ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿ ಗಳನ್ನು ಶಾಲೆಯವರು ಹಾಗೂ ಪೋಷಕರು ಕೊಂಡಾಡುತ್ತಾರೆ. ಉತ್ತೀರ್ಣರಾದವರು ತಮ್ಮ ಮುಂದಿನ ಗುರಿಯ ಬಗ್ಗೆ ಚಿಂತಿಸುತ್ತಾರೆ. ಆದರೆ ಅನುತ್ತೀರ್ಣ ಗೊಂಡ ಕೆಲ ವಿದ್ಯಾರ್ಥಿಗಳು ಪೋಷಕ ರಿಗೆ ಹೆದರಿ ಜೀವಕ್ಕೆ ಅಪಾಯ ತಂದುಕೊಳ್ಳುವ ಸಾಧ್ಯತೆಗಳಿರುತ್ತವೆ. ಉತ್ತೀರ್ಣರಾಗಲಿ, ಅನುತ್ತೀರ್ಣರಾಗಲಿ ಮಕ್ಕಳನ್ನು ಪ್ರೋತ್ಸಾಹಿಸಿ ಮುಂದಿನ ದಾರಿ ತೋರಿಸಬೇಕಾದ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿರುತ್ತದೆ. ಮಕ್ಕಳು ಗೆದ್ದಾಗ ಹಿಗ್ಗದಂತೆ, ಸೋತಾಗ ಕುಗ್ಗದಂತೆ ಅವರನ್ನು ಪ್ರೋತ್ಸಾಹಿಸಿ ಮೇಲೆತ್ತಬೇಕು. ಪರೀಕ್ಷಾ ಸಮಯದಲ್ಲಿ ಮಕ್ಕಳು ಸಮಯ ವ್ಯರ್ಥ ಮಾಡದಂತೆ, ಓದುವತ್ತ ಅವರ ಗಮನ ಕೇಂದ್ರೀಕೃತವಾಗುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅವರು ಅನುತ್ತೀರ್ಣರಾದರೂ ಅವರ ಮನಸ್ಸಿಗೆ ಘಾಸಿಯಾಗದಂತೆ ಭರವಸೆಯ ಮಾತುಗಳನ್ನಾಡಿ, ಹುರಿದುಂಬಿಸಬೇಕು. ಮಕ್ಕಳು ಕೂಡ ಎದೆಗುಂದದೆ, ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸ ಬೇಕು. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.

Tags:
error: Content is protected !!