Mysore
17
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಚರ್ಚಾ ಹಂತದಲ್ಲಿ ಕ್ಷೇತ್ರ ಪನರ್‌ವಿಂಗಡಣೆ ವಿಚಾರ: ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಕ್ಷೇತ್ರ ಪುನರ್‌ ವಿಂಗಡಣೆ ವಿಚಾರ ಇನ್ನೂ ಚರ್ಚಾ ಹಂತದಲ್ಲಿದೆ. ಮುಂದಿನ ಗೈಡ್‌ಲೈನ್‌ ನೋಡಿ ಇದರ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.

ಕ್ಷೇತ್ರ ಪನರ್‌ ವಿಂಗಡಣೆಗೆ ಕಾಂಗ್ರೆಸ್‌ ಪಕ್ಷದ ವಿರೋಧ ವಿಚಾರಕ್ಕೆ ಸಂಬಂಧೀಸಿದಂತೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್‌ ವಿಂಗಡಣೆ ಆದರೆ ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆ ಆಗಬಹುದು ಎಂಬ ಭಾವನೆ ಎಲ್ಲರಿಗೂ ಇದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಗೈಡ್‌ ಲೈನ್‌ ಬರುತ್ತದೆ ನೋಡೋಣ ಎಂದರು.

ಸ್ವಾತಂತ್ರ್ಯದ ನಂತರ ಸುಮಾರು 50 ವರ್ಷಗಳ ಕಾಲ ಕಾಂಗ್ರೆಸ್‌ ದೇಶದಲ್ಲಿ ಆಡಳಿತ ನಡೆಸಿದೆ. ಆ ಸಮಯದಲ್ಲಿ ಸಂಪೂರ್ಣ ಬಹುಮತ ಕಾಂಗ್ರೆಸ್‌ಗೆ ಇತ್ತು. ಆದಾದ ನಂತರ ಕೆಲ ಬದಲಾವಣೆ ಆಗಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ರಾಜ್ಯಗಳ ವಿಚಾರದಲ್ಲಿ ಯಾವ ರೀತಿಯ ಗೈಡ್‌ಲೈನ್‌ ಬರುತ್ತೆ ಆ ಆಧಾರದ ಮೇಲೆ ಚರ್ಚೆ ಮಾಡೋಣ ಎಂದು ತಿಳಿಸಿದರು

 

Tags:
error: Content is protected !!