Mysore
21
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಅಪಘಾತದ ಬಳಿಕ ಚಾಲಕನಿಗೆ ಭಯ ಆಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ನನ್ನ ಕಾರು ಅಪಘಾತವಾದ ಬಳಿಕ ಚಾಲಕ ವೇಗವಾಗಿ ಕಾರು ಚಲಾಯಿಸುವುದಿಲ್ಲ. ಬೇಗ ಹೋಗು ಅಂದರೂ 30 ಕಿ.ಮೀ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಕಾರು ಚಲಾಯಿಸುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಕಾರಿನ ಅಪಘಾತದ ಬಗ್ಗೆ ನೆನಪಿಸಿಕೊಂಡು ಬೇಸರ ವ್ಯಕ್ತಪಡಿಸಿದರು.

ರಸ್ತೆ ಅಪಘಾತವಾದ ಮೇಲೆ ಇದು ನನ್ನ ಮೊದಲ ಕಾರ್ಯಕ್ರಮ. ಅಪಘಾತದ ಬಳಿಕ ನನ್ನ ಕಾರು ಚಾಲಕ 30ರ ಮೇಲೆ ಚಲಾಯಿಸುವುದಿಲ್ಲ ಎಂದರು.

ಇನ್ನು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಬಳಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಕಾರು ಅಪಘಾತವಾಗಿತ್ತು. ನಾಯಿ ಅಡ್ಡ ಬಂದಿದ್ದನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆನ್ನುಮೂಳೆಗೆ ಬಲವಾದ ಪೆಟ್ಟು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಅವರು ಕಳೆದ ಒಂದೂವರೆ ತಿಂಗಳಿಗಿಂತ ಹೆಚ್ಚಿನ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

 

 

 

Tags:
error: Content is protected !!