Mysore
25
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಕೊಡಗು ವಿವಿ ಉಳಿಸುವಂತೆ ಪ್ರಮುಖರಿಗೆ ಮನವಿ

ಮಡಿಕೇರಿ: ಕೊಡಗಿನ ಏಕೈಕ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಕೋರಿ ಕೊಡಗು ವಿವಿ ಹಿತರಕ್ಷಣಾ ಬಳಗದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಿದರು.

ನಂತರ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ವಿಶ್ವವಿದ್ಯಾಲಯ ಉಳಿಸುವಂತೆ ಮನವಿ ಸಲ್ಲಿಸಿದರು.

Tags:
error: Content is protected !!