Mysore
31
scattered clouds

Social Media

ಬುಧವಾರ, 20 ಮೇ 2026
Light
Dark

ರಾಜ್ಯ ಸರ್ಕಾರದಿಂದ ವಿಮಾ ಮೊತ್ತ ಏರಿಕೆ ಮಾಡಲು ಚಿಂತನೆ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್‌ ಕಾರ್ಡ್‌ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌14) ವಿಧಾನಪರಿಷತ್‌ ಕಲಾಪದಲ್ಲಿ ಈ ಕುರಿತು ವಿಧಾನ ಪರಿಷತ್‌ ಸದಸ್ಯ ವೈ.ಎಂ.ಸತೀಶ್‌ ಅವರು, ಎಲ್ಲಾ ರೀತಿಯ ಅಂಗ ವೈಫಲ್ಯ ಒಳಗೊಂಡ ವಿಮೆ ಯೋಜನೆಗಳಿಯೇ? ವಿಶೇಷ ಚೇತನರಿಗೆ ಯಾವ ಬಗೆಯ ಸೌಲಭ್ಯಗಳಿವೆ ಎಂದು ಪ್ರಶ್ನಿಸಿದ್ದರು.

ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಅಂಗವೀಕಲತೆ ನಿವಾರಣೆಗಾಗಿ ವೈದ್ಯಕೀಯ ಪರಿಹಾರ ನಿಧಿ ಹಾಗೂ ನಿರಾಮಯ ಆರೋಗ್ಯ ವಿಮಾ ಯೋಜನೆ ಇದೆ. ಆದರೆ ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸುವ ತೀರ್ಮಾನ ಮಾಡಿದ್ದೇವೆ ಎಂದರು.

ಇನ್ನು ವಿಕಲಚೇತನರಿಗೆ ಒಂದು ಲಕ್ಷದವರೆಗೆ ವಿಮೆ ಸೌಲಭ್ಯವಿದ್ದು, ಒಂದು ವರ್ಷಕ್ಕೆ ಒಂದು ಲಕ್ಷದವರೆಗೂ ವಿಮೆ ಸೌಲಭ್ಯವಿದೆ ಮುಂಬರುವ ದಿನಗಳಲ್ಲಿ ಅದನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಿದರು.

Tags:
error: Content is protected !!