Mysore
21
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ತುಳು-ಕನ್ನಡ ವಿದ್ವಾಂಸ ಡಾ.ವಾಮನ ನಂದಾವರ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ತುಳು ಮತ್ತು ಕನ್ನಡ ವಿದ್ವಾಂಸ ಹಾಗೂ ಸಾಹಿತಿಯಾಗಿದ್ದ ಡಾ.ವಾಮನ ನಂದಾವರ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ತುಳು-ಕನ್ನಡ ವಿದ್ವಾಂಸರಾಗಿದ್ದ ಡಾ.ವಾಮನ ನಂದಾವರ ನಿಧನದಿಂದ ದು:ಖವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತುಳು ಅಕಾಡೆಮಿಯ ಅಧ್ಯಕ್ಷತೆಯೂ ಸೇರಿದಂತೆ ಹಲವಾರು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಗಳ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ಡಾ.ನಂದಾವರ ಅವರು ತುಳು ಮತ್ತು ಕನ್ನಡ ಜಾನಪದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಗ್ರಂಥಗಳನ್ನು ರಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಡಾ.ವಾಮನ ನಂದಾವರ ಅವರ ಕುಟುಂಬ ಮತ್ತು ಬಂಧುಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರುವೆ ಎಂದು ಸಂತಾಪ ಸೂಚಿಸಿದ್ದಾರೆ.

Tags:
error: Content is protected !!