Mysore
34
scattered clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಇವಿಎಂ ಬಗ್ಗೆ ಕೆಲ ಅನುಮಾನ: ಅಭಿಷೇಕ್‌ ಮನು ಸಿಂಘ್ವಿ

ಮೈಸೂರು: ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ. ಬದಲಿಗೆ ಕೆಲವು ಅನುಮಾನಗಳಿವೆ. ಅದಕ್ಕೆ ಉತ್ತರ ಬಯಸುತ್ತಿದ್ದೇವೆ ಎಂದು ಎಐಸಿಸಿ ವಕ್ತಾರ ಅಭಿಷೇಕ್‌ ಮನು ಸಿಂಘ್ವಿ ಹೇಳಿದ್ದಾರೆ.

ನಗರದಲ್ಲಿ ಇಂದು ಮಾನತಾಡಿದ ಅವರು, ಚುನಾವಣಾ ಪ್ರಕ್ರಿಯೆ ಕುರಿತು ನಮಗೆ ಅನುಮಾನವಿದೆ. ಅದಕ್ಕೆ ನೀವು ಸ್ಪಷ್ಟನೆ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.

ಮಹಾರಾಷ್ಟ್ರ ಸೇರಿ ಕೆಲ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಇದ್ದಕಿದ್ದಂತೆ ಮತಗಳು ಹೆಚ್ಚಾಗಿರುವುದರ ಕುರಿತು ದೇಶದೆಲ್ಲೆಡೆ ಅನುಮಾನ ವ್ಯಕ್ತವಾಗಿದೆ ಎಂದರು.

ಬಿಜೆಪಿ ಸರ್ಕಾರವು ದೇಶಾದಾದ್ಯಂತ ತಮ್ಮ ಪ್ರಾಬಲ್ಯ ಹೊಂದಲು ಚುನಾವಣಾ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜೊತೆಗೆ ಸಿಬಿಐ, ಇಡಿ, ಐಟಿಯಂತಹ ಸ್ವಾಯತ್ತ ಸಂಸ್ಥೆಗಳನ್ನು ಕೂಡ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಇನ್ನು ಗುತ್ತಿಗೆಯಲ್ಲಿ ರಾಜ್ಯ ಸರ್ಕಾರ ಮುಸ್ಲಿಂರಿಗೆ 4% ಮೀಸಲಾತಿ ನೀಡಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಇದು ರಾಜ್ಯ ಸರ್ಕಾರದ ಅಧಿಕಾರ. ಅದನ್ನು ಪ್ರಶ್ನಿಸಬಾರದು. ಇದರ ಕುರಿಅಗಿ ನ್ಯಾಯಾಲಯದ ಮೊರೆ ಹೋಗುವುದಕ್ಕೆ ಬಿಜೆಪಿಗೆ ಅವಕಾಶವಿದೆ ಎಂದು ತಿಳಿಸಿದರು.

 

Tags:
error: Content is protected !!