Mysore
21
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಮೈಸೂರು| ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಪ್ರತಿಭಟನೆ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ ಹೇಳಿಕೆ ಕುರಿತು ನಗರದ ವಿವಿಧ ಕಡೆಗಳಲ್ಲಿ ಬಿಜೆಪಿಯ ಮುಖಂಡಉ ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಇಂದು(ಮಾರ್ಚ್.‌25) ಕೆ.ಆರ್‌.ಕ್ಷೇತ್ರ, ಎನ್‌.ಆರ್‌.ಕ್ಷೇತ್ರ, ಚಾಮರಾಜ ಕ್ಷೇತ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಜೆಪಿಯೂ ಪ್ರತಿಭಟನೆ ನಡೆಸಿತು. ಅಂತೆಯೇ ಮೈಸೂರಿನ ಟೌನ್‌ ಹಾಲ್‌ ಬಳಿ ಮಾಜಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ್ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾವಣೆ ಕುರಿತು ಡಿಕೆಶಿ ಹೇಳಿಕೆ ಖಂಡಿಸಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕ ಎಲ್‌.ನಾಗೇಂದ್ರ ಅವರು, ಮುಸಲ್ಮಾನರಿಗೆ ಮೀಸಲಾತಿ ನೀಡುವುದಕ್ಕೆ ಸಂವಿಧಾನ ಬದಲಾವಣೆ ಮಾಡುತ್ತೇವೆಂದು ಹೇಳುತ್ತಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಲು ಹೊರಟರೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಇನ್ನು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡುವವರೆಗೂ ಬಿಡುವುದಿಲ್ಲ. ಮೈಸೂರಿನಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ನಿರಂತ ಧರಣಿ ನಡೆಸುತ್ತೇವೆ ಎಂದರು.

 

Tags:
error: Content is protected !!