Mysore
31
scattered clouds

Social Media

ಶನಿವಾರ, 11 ಏಪ್ರಿಲ 2026
Light
Dark

ಅಂಬೇಡ್ಕರ್‌ ಜಯಂತಿ ದಿನದಂದು ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಘೋಷಣೆ ಮಾಡಿದ್ದಾರೆ.

ಸಮಾನತೆಯ ಹರಿಕಾರ, ಸಮಾಜದಲ್ಲಿ ಹೊಸ ಯುಗ ಸ್ಥಾಪಿಸಿದ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಜನ್ಮ ದಿನದಂದು ಸಾರ್ವಜನಿಕ ರಜೆ ಇರುತ್ತದೆ. ಈ ನಿರ್ಧಾರ ತೆಗೆದುಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ ಎಂದು ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಕುರಿತಂತೆ ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಏ.14 ರಂದು ಮುಚ್ಚಲಿವೆ. ಇದಕ್ಕೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

 

Tags:
error: Content is protected !!