Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಯುಗಾದಿ ಭರಾಟೆ: ನಗರದಲ್ಲಿ ಟ್ರಾಫಿಕ್‌ ಕಿರಿಕಿರಿ

ಮೈಸೂರು: ಹಿಂದೂಗಳ ಹೊಸ ವರ್ಷ ಎಂದು ಕರೆಯಲ್ಪಡುವ ಯುಗಾದಿ ಹಾಗೂ ಪವಿತ್ರ ರಂಜಾನ್‌ ಹಬ್ಬದ ರಜೆ ಹಿನ್ನಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆಯಾಗಿ ಸಾರ್ವಜನಿಕರು ಪರದಾಡಿದರು.

ನಗರದ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣ, ನಗರ ಬಸ್‌ ನಿಲ್ದಾಣ, ದೇವರಾಜ ಅರಸು ರಸ್ತೆ, ರಾಮಸ್ವಾಮಿ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದ ಸಾರ್ವಜನಿಕರು ಕಿರಿ ಕಿರಿ ಅನುಭವಿಸಿದರು.

ಹಬ್ಬದ ಖರೀದಿ ಭರಾಟೆ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆ, ವಾಣಿ ವಿಲಾಸ ಮಾರುಕಟ್ಟೆ, ಹೂ-ಹಣ್ಣು, ತರಕಾರಿ, ಬೇವು-ಸೊಪ್ಪನ್ನು ಖರೀದಿಸಲು ಜನ ಮುಗಿ ಬಿದ್ದ ಕಾರಣ ರಸ್ತೆಗಳಲ್ಲಿ ವಾಹನಗಳು ನಿಂತುಕೊಂಡಿದ್ದವು.

ಜೊತೆಗೆ ರಾಜ್ಯ ರಾಜಧಾನಿ ಸೇರಿದಂತೆ ಹಲವು ಕಡೆಯಿಂದ ಮೈಸೂರಿನತ್ತ ಸಾರ್ವಜನಿಕರು ಧಾವಿಸಿದ್ದರಿಂದ ಕಾಲಿಡಲು ಸಾಧ್ಯವಿಲ್ಲದಷ್ಟು ವಾಹನ ದಟ್ಟನೆ ಉಂಟಾಯಿತು. ಟ್ರಾಫಿಕ್‌ ಪೊಲೀಸರು ಸಂಚಾರ ನಿಯಂತ್ರಿಸಲು ಪರದಾಡಿದರು.

ಗ್ರಾಮೀಣ ಬಸ್‌ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್‌ ಆಗಿದ್ದ ದೃಶ್ಯಗಳು ಕಂಡು ಬಂದವು.

Tags:
error: Content is protected !!