Mysore
28
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ದೇಶದಲ್ಲಿ ಎಲ್ಲಾ ಸಮುದಾಯಗಳು ಸೌಹಾರ್ದತೆಯಿಂದ ಬಾಳಲಿ, ಸಿಎಂ ಆರೋಗ್ಯ ಸುಧಾರಿಸಲು ವಿಶೇಷ ಪ್ರಾರ್ಥನೆ: ಜಮೀರ್‌

ಬೆಂಗಳೂರು: ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್‌ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಹಾಗೂ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸಚಿವ ಬಿ.ಜೆಡ್‌.ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು(ಮಾರ್ಚ್.‌31) ರಂಜಾನ್‌ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ರಂಜಾನ್‌ ಹಬ್ಬದ ಹಾರ್ದಿಕ ಶುಭಾಶಯಗಳು. ಮೂವತ್ತು ದಿನಗಳ ಕಾಲ ಉಪವಾಸದಿಂದ ಇದ್ದೇವೆ. ನಿನ್ನೆ ಹಿಂದೂಗಳಿಗೆ ಹೊಸ ವರ್ಷವಾಗಿರುವ ಯುಗಾದಿ ಹಬ್ಬವಾದರೆ, ಇಂದು ನಮಗೆ ರಂಜಾನ್‌ ದೊಡ್ಡ ಹಬ್ಬವಾಗಿದೆ. ಈ ಭಾರತದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್‌ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಎಂದು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಇನ್ನು ಇಂದು ಸುಮಾರು ಬೆಳಿಗ್ಗೆ 9.35 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ಫೋನ್‌ ಮಾಡಿ ರಂಜಾನ್‌ ಹಬ್ಬದ ವಿಶ್‌ ಮಾಡಿದ್ದಾರೆ. ಅಲ್ಲದೇ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಈ ಹಬ್ಬದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಹೀಗಾಗಿ ಅವರ ಆರೋಗ್ಯ ಆದಷ್ಟು ಬೇಗ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಸಲ್ಲಿಸಿದೆ ಎಂದರು.

ಇದೇ ಸಂದರ್ಭದಲ್ಲಿ ಮುಸ್ಲಿಂ ಭಾಂದವರು ಕಪ್ಪು ಪಟ್ಟಿ ಧರಿಸಿ ಸಾಮಾಹಿಕ ಪ್ರಾರ್ಥನೆ ಸಲ್ಲಿಸಿರುವ ವಿಚಾರವಾಗಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಇವತ್ತು ಕಪ್ಪು ಪಟ್ಟಿ ಧರಿಸಿದ್ದೇವೆ. ವಕ್ಫ್ ಮಸೂದೆ ತರಬಾರದು ಎಂಬುದು ನಮ್ಮ ಬೇಡಿಕೆಯಾಗಿದೆ. ಆದರೆ ಇದಕ್ಕೆ ನಮ್ಮ ರಾಜ್ಯ ಸರ್ಕಾರದಿಂದ ಬೆಂಬಲವಿಲ್ಲ ಎಂದು ತಿಳಿಸಿದರು.

Tags:
error: Content is protected !!