Mysore
17
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

ವಿನಯ್ ಪ್ರಕರಣದಲ್ಲಿ ಶಾಸಕರ ಹೆಸರು ಸೇರಿಸಲೆಬೇಕು: ಬಿ.ವೈ.ವಿಜಯೇಂದ್ರ ಒತ್ತಾಯ

ಮಡಿಕೇರಿ: ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದ ಕೊಡಗಿನ ವಿನಯ್ ಸೋಮಯ್ಯ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು.

ಈ ವಿಚಾರವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಮ್ಮ ಪಕ್ಷದ ನಿಷ್ಠೆಯ ಹಾಗೂ ಪ್ರಾಮಾಣಿಕ ಕಾರ್ಯಕರ್ತನನ್ನು ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬೆದರಿಕೆ ಹಾಗೂ ಒತ್ತಡ ಹೇರಿರುವುದು ಅತ್ಯಂತ ಖಂಡನೀಯ.

ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾಗಿರುವ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಅವರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಲೇಬೇಕು. ವಿನಯ್ ಸೋಮಯ್ಯ ಅವರ ಸಾವಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

ಸರ್ಕಾರದ ವಿರುದ್ಧ ಟೀಕೆ ಮಾಡಿದರೆ ವಾಟ್ಸ್ಯಾಪ್ ಗ್ರೂಪ್‌ಗಳ ಅಡ್ಮಿನ್‌ಗಳ ಮೇಲೆ ಎಫ್ಐಆರ್ ದಾಖಲಿಸುವ, ಬಂಧಿಸುವ ಕೆಟ್ಟ ಸಂಪ್ರದಾಯಕ್ಕೆ ಕಾಂಗ್ರೆಸ್ ಸರ್ಕಾರ ನಾಂದಿ ಹಾಡಿದೆ. ರಾಜ್ಯದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ. ವಿನಯ್ ಸೋಮಯ್ಯ ಅವರ ಪ್ರಕರಣದಲ್ಲಿ ಶಾಸಕರ ಹೆಸರನ್ನು ಸೇರಿಸಲೇ ಬೇಕು, ಇಲ್ಲದಿದ್ದರೆ ಮುಂದಿನ ಅನಾಹುತಗಳಿಗೆ ಪೊಲೀಸ್ ಇಲಾಖೆ ಮತ್ತು ಸರ್ಕಾರವೇ ಹೊಣೆಯಾಗಲಿದೆ ಎಂದು ಹೇಳಿದರು.

Tags:
error: Content is protected !!