Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ರಾಜ್ಯದಲ್ಲಿ ಇಂದು ಹಾಗೂ ನಾಳೆ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾವೇರಿ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.

ಮಲೆನಾಡು ಹಾಗೂ ಕರಾವಳಿ ಭಾಗದ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೇಸಿಗೆ ಮಳೆಯಾಗಿರುವುದರಿಂದ ಕೆಲವೆಡೆ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Tags:
error: Content is protected !!