Mysore
34
few clouds

Social Media

ಗುರುವಾರ, 09 ಏಪ್ರಿಲ 2026
Light
Dark

ಮೈಸೂರು | ಬೆಲೆ ಏರಿಕೆಗೆ ಸಿಪಿಐ(ಎಂ) ಖಂಡನೆ

ಮೈಸೂರು: ಹಾಲು, ಮೊಸರು, ವಿದ್ಯುತ್‌, ಮೆಟ್ರೊ ಪ್ರಯಾಣ, ಸಾರ್ವಜನಿಕ ಸಾರಿಗೆ, ಡೀಸೆಲ್, ಪೆಟ್ರೋಲ್‌ ದರ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ರಾಮಸ್ವಾಮಿ ವೃತ್ತದ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಅಗತ್ಯ ವಸ್ತುಗಳು ಸೇರಿದಂತ ಮೊದಲಾದವುಗಳ ಬೆಲೆ ಏರಿಕೆ ಮಾಡಿರುವುದರಿಂದ ಜನತೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಪೈಪೋಟಿಗೆ ಬಿದ್ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜನಸಾಮಾನ್ಯರ ಬಗ್ಗೆ ಕಾಳಜಿಯಿದ್ದರೆ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ಸಿಪಿಐ(ಎಂ) ಮೈಸೂರು ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಮುಜೀಬ್, ಸದಸ್ಯರಾದ ಎಚ್.ಎಸ್.ಸುನಂದ, ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇ ಗೌಡ, ಕೆ.ಬಸವರಾಜ್, ಜಿ.ಜಯರಾಂ, ಸುಬ್ರಹ್ಮಣ್ಯ, ಪೃಥ್ವಿ, ಕುಮಾರಿ, ಶಕುಂತಲಾ, ಲೀಲಾವತಿ, ಮಂಜುಳಾ, ಅಣ್ಣಪ್ಪ, ಮೆಹಬೂಬ್, ಬಾಲಾಜಿ ರಾವ್, ಕೃಷ್ಣ, ಚಂದ್ರಶೇಖರ್, ರಾಜೇಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags:
error: Content is protected !!