Mysore
28
few clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಪಾಕಿಸ್ತಾನದ ಅವನತಿ ಆರಂಭವಾಗಿದೆ: ಸಂಸದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ, ಅಮಿತ್‌ ಶಾ ಅವರು ಕೈಗೊಂಡ ಕ್ರಮಗಳಿಂದ ಇತ್ತೀಚಿನ ದಿನಗಳಲ್ಲಿ ಶಾಂತಿ ನೆಲೆಸಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಅಲ್ಲಿಗೆ ಹೋಗಲು ಆರಂಭಿಸಿದ್ದರು.

ಆದರೆ ನಿನ್ನೆ ಪ್ರವಾಸಿಗರನ್ನೇ ಗುರಿಯಾಗಿಸಿ ಉಗ್ರರು ಈ ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ಉಗ್ರರ ಹತ್ಯೆಯಾಗಲಿದೆ. ನಮ್ಮ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದ್ದು, ಅದನ್ನು ಸಹಿಸಿಕೊಳ್ಳಲು ಪಾಕಿಸ್ತಾನಕ್ಕೆ ಆಗುತ್ತಿಲ್ಲ. ಪಾಕಿಸ್ತಾನದ ಅವನತಿ ಆರಂಭವಾಗಿದೆ. ಪ್ರಧಾನಿ ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದರು.

ಯಾವುದೇ ಕಾರಣಕ್ಕೂ ಉಗ್ರರನ್ನು ಸುಮ್ಮನೆ ಬಿಡಲ್ಲ. ಶೀಘ್ರದಲ್ಲೇ ಅವರ ಹತ್ಯೆ ಗ್ಯಾರಂಟಿ ಎಂದು ಭಯೋತ್ಪಾದಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:
error: Content is protected !!