Mysore
20
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ಈ ಬಾರಿ ಯಾರೂ ನನ್ನ ಜನ್ಮದಿನಾಚರಣೆ ಆಚರಿಸುವುದು ಬೇಡ ಎಂದ ಡಿಸಿಎಂ ಡಿಕೆಶಿ: ಕಾರಣ ಏನು ಗೊತ್ತಾ.?

ಬೆಂಗಳೂರು: ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ. ನನ್ನ ಜನ್ಮ ದಿನದ ಸಂದರ್ಭದಲ್ಲಿ ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಕೂಡ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:- ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂಗೆ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ 

ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಜನ್ಮದಿನದ ಶುಭಕೋರುವ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ನಮ್ಮ ಯೋಧರ ಜೊತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ತಿಳಿಸಿದರು.

Tags:
error: Content is protected !!