Mysore
21
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಮೇ.23 ರಿಂದ 2 ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮೇ.23ರಂದು ಮೈಸೂರಿಗೆ ಭೇಟಿ ನೀಡಲಿದ್ದು, ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮೇ.23 ಹಾಗೂ 24ರಂದು ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವೇಳೆ ಸಾಹಿತಿ ದೇವನೂರು ಮಹದೇವ ಅವರ ಪುಸ್ತಕ ಆಧಾರಿತ ಎದೆಗೆ ಬಿದ್ದ ಅಕ್ಷರ ಎಂಬ ನಾಟಕವನ್ನು ಕಲಾಮಂದಿರದಲ್ಲಿ ವೀಕ್ಷಣೆ ಮಾಡಲಿದ್ದಾರೆ.

ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ ಅವರು, ಮೇ.24ರ ಶನಿವಾರ ರಾತ್ರಿ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ.

Tags:
error: Content is protected !!