Mysore
27
moderate rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

ಗುಂಡ್ಲುಪೇಟೆ: ಅನೈತಿಕ ಚಟುವಟಿಕೆ ತಡೆಯಲು ಗ್ರಾಮಸ್ಥರ ಮಾಸ್ಟರ್‌ ಪ್ಲಾನ್: ಏನದು ಗೊತ್ತಾ.?

Gundlupet Villagers master plan

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.

ಗ್ರಾಮಸ್ಥರೇ ಸ್ವತಃ ಕಾನೂನನ್ನು ಕೈಗೆ ತೆಗೆದುಕೊಂಡು ಕಟ್ಟಾಜ್ಞೆ ಹೊರಡಿಸಿದ್ದು, ಗ್ರಾಮದಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಅಕ್ರಮ ಮದ್ಯ ಮಾರಾಟ, ಜೂಜಾಟದಂತಹ ಅನೈತಿಕ ಚಟುವಟಿಕೆಗಳು ನಡೆದರೆ ಭಾರೀ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದರೆ 50 ಸಾವಿರ ದಂಡ,
ಜೂಜಾಟವಾಡಿದರೆ 50 ಸಾವಿರ ದಂಡ, ಗ್ರಾಮಕ್ಕೆ ಅನಧಿಕೃತ ವ್ಯಕ್ತಿ ಪ್ರವೇಶ ಮಾಡಿದರೆ 1 ಲಕ್ಷ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ತಪ್ಪು ಮಾಡಿರುವವರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿದರೆ ಅಂತಹ ವ್ಯಕ್ತಿಗಳಿಗೆ 10 ಸಾವಿರ ಬಹುಮಾನ ಘೋಷಣೆ ಮಾಡಲಾಗುವುದು ಎಂದು ಗ್ರಾಮದ ಯಜಮಾನರುಗಳೇ ಘೋಷಣೆ ಮಾಡಿದ್ದಾರೆ. ಈ ಕುರಿತು ಸಭೆ ನಡೆಸಿರುವ ಗ್ರಾಮಸ್ಥರು ಕಟ್ಟಾಜ್ಞೆ ಹೊರಡಿಸಿದ್ದು, ಗ್ರಾಮದಲ್ಲಿ ಯಾವುದೇ ಅನೈತಿಕ ಚಟುವಟಿಕೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಿದ್ದಾರೆ.

Tags:
error: Content is protected !!