Mysore
27
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಚಾಮುಂಡಿಬೆಟ್ಟಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ

BS Yediyurappa

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್‌ ಕಾರ್ಡ್‌ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.

ಮುಂದಿನ ತಿಂಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಯಡಿಯೂರಪ್ಪ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮನೆಯ ಪ್ರತಿಯೊಂದು ಶುಭ ಸಮಾರಂಭಕ್ಕೂ ಮುನ್ನ ದೇವರ ದರ್ಶನ ಪಡೆಯುವ ಯಡಿಯೂರಪ್ಪ, ಇಂದು ಚಾಮುಂಡೇಶ್ವರಿ ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್ ಕಾರ್ಡ್ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.

ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ ಇದ್ದಕ್ಕಿದ್ದ ಹಾಗೇ ತಾಯಿಯ ದರ್ಶನ ಮಾಡಬೇಕು ಅನ್ನಿಸಿತು.
ಅದಕ್ಕಾಗಿ ಚಾಮುಂಡಿ ತಾಯಿಯ ದರ್ಶನ ಪಡೆಯಲು ಬಂದಿದ್ದೇನೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಮೊಮ್ಮಗನ ಮದುವೆ ಇರುವ ಕಾರಣಕ್ಕೆ ಸಂಕಲ್ಪ ಮಾಡಿದ್ದೇವೆ. ಈ ಸಂದರ್ಭದಲ್ಲಿ ನಾನು ಏನೂ ರಾಜಕೀಯ ಮಾತನಾಡಲ್ಲ ಎಂದರು.

ಇನ್ನು ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಬಹುಭಾಷಾ ನಟ ಕಮಲ ಹಾಸನ್ ಹೇಳಿಕೆ ವಿಚಾರ‌ಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಮಲಾ ಹಾಸನ್ ಹೇಳಿಕೆ ಖಂಡನೀಯ. ಎಲ್ಲರೂ ಕಮಲ್‌ ಹಾಸನ್ ಹೇಳಿಕೆಯನ್ನು ಖಂಡಿಸಿದ್ದಾರೆ. ಆ ರೀತಿಯ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದರು.

Tags:
error: Content is protected !!