Mysore
25
broken clouds

Social Media

ಬುಧವಾರ, 06 ಮೇ 2026
Light
Dark

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಅನುದಾನ ಬಿಡುಗಡೆ ಮಾಡಿದ ಆರ್ಥಿಕ ಇಲಾಖೆ

guarantee yojane

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65 ಕೋಟಿ ಹಣ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಜಿಲ್ಲಾ ಪಂಚಾಯಿತಿಗಳಿಗೆ 1.31 ಕೋಟಿ ರೂ, ತಾಲ್ಲೂಕು ಪಂಚಾಯಿತಿಗಳಿಗೆ 6.33 ಕೋಟಿ ರೂ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸಭಾ ಭತ್ಯೆಯನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ್ದು, ಮೂರು ತಿಂಗಳ ಅಡ್ವಾನ್ಸ್ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದೆ.

ಸರ್ಕಾರ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನೇ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ವಿಚಾರದ ಬಗ್ಗೆ ಕಳೆದ ಅಧಿವೇಶನದಲ್ಲಿ ಸರ್ಕಾರ ಹಾಗೂ ವಿಪಕ್ಷಗಳ ಮಧ್ಯೆ ಭಾರೀ ಜಟಾಪಟಿ ನಡೆದಿತ್ತು. ಈ ಬೆನ್ನಲ್ಲೇ ಜಿ.ಪಂ, ತಾಪಂ.ಗಳಿಗೆ 7.65 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶಿಸಿದೆ.

Tags:
error: Content is protected !!