Mysore
25
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಇಂದಿನಿಂದ ರಾಜ್ಯದಲ್ಲಿ ಮಳೆ ಚುರುಕು: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಬೆಳಗಾವಿ, ಬೀದರ್‌, ಧಾರವಾಡ, ಕಲಬುರ್ಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೂಡ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನು ಭಾರೀ ಮಳೆಯಾಗಲಿರುವ ಪರಿಣಾಮ ಗುಡ್ಡ ಕುಸಿತ ಸೇರಿದಂತೆ ಹಲವು ಅನಾಹುತ ಸಂಭವಿಸುವ ಸಾಧ್ಯತೆಯಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!