Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಓದುಗರ ಪತ್ರ: ಯಡಹಳ್ಳಿಯಲ್ಲಿ ಚಿರತೆ ಹಾವಳಿ ನಿಯಂತ್ರಿಸಿ

ಓದುಗರ ಪತ್ರ

ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ ಪಡೆದಿದ್ದು, ಚಿರತೆಯ ಭಯದಿಂದಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗಿದೆ.

ಚಿರತೆ ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದರೂ ಸಂಬಂಧಪಟ್ಟವರು ಚಿರತೆ ಹಾವಳಿ ನಿಯಂತ್ರಿಸಲು ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನಾದರೂ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಬೋನನ್ನು ಇಡುವ ಮೂಲಕ ಗ್ರಾಮಸ್ಥರ ಹಿತವನ್ನು ಕಾಪಾಡಬೇಕಾಗಿದೆ.

– ಎಸ್. ಸಚ್ಚಿದಾನಂದ, ಯಡಹಳ್ಳಿ ಗ್ರಾಮ

Tags:
error: Content is protected !!