Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ನನ್ನ, ಯಡಿಯೂರಪ್ಪ ಸ್ನೇಹ ಮುಂದುವರಿಯುತ್ತಿದೆ: ಮಾಜಿ ಸಚಿವ ಈಶ್ವರಪ್ಪ

ಬೆಂಗಳೂರು: ನಾನು ಸದ್ಯಕ್ಕೆ ಬಿಜೆಪಿಗೆ ಹೋಗುವುದಿಲ್ಲ. ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ ಆಹ್ವಾನ ಕೊಟ್ಟಿರುವ ಬಗ್ಗೆ ಗೊತ್ತಿಲ್ಲ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಹಾಗೂ ಯಡಿಯೂರಪ್ಪ ಸ್ನೇಹ ಬಹಳ ಹಳೆಯದು. ನಮ್ಮಿಬ್ಬರ ಮಧ್ಯೆ ಸ್ನೇಹ ಮುಂದುವರಿದಿದೆ. ಸ್ನೇಹ ಬೇರೆ, ರಾಜಕಾರಣ ಬೇರೆ ಎಂದು ತಿಳಿಸಿದರು.

Tags:
error: Content is protected !!