Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಹಾಸನ: ಹೃದಯಾಘಾತಕ್ಕೆ ಮತ್ತೋರ್ವ ಯುವಕ ಸಾವು

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೋರ್ವ ಯುವಕ ಸಾವನ್ನಪ್ಪಿದ್ದಾರೆ.

ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ಚೇತನ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾನೆ.

ಕಿಕ್ಕೇರಿ ಮೂಲದ ಚೇತನ್‌ ಹಳೇ ಬಸ್‌ ನಿಲ್ದಾಣದ ಬಳಿ ಮೊಬೈಲ್‌ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಿದ್ದ ಚೇತನ್‌ ಕಳೆದ ರಾತ್ರಿ ಊಟಕ್ಕೆ ಕುಳಿತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೆಳಗೆ ಕುಳಿತಿದ್ದ ಚೇತನ್‌ ಮೇಲೆ ಏಳಲಾಗದೇ ಕುಸಿದುಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Tags:
error: Content is protected !!