Mysore
28
clear sky

Social Media

ಗುರುವಾರ, 26 ಫೆಬ್ರವರಿ 2026
Light
Dark

ಶಾಸಕರಿಗೆ ಅನುದಾನ ಇಲ್ಲದೇ ಎರಡೂವರೆ ವರ್ಷ ಆಯಿತು: ಸಂಸದ ಬಸವರಾಜ ಬೊಮ್ಮಾಯಿ ಲೇವಡಿ

It’s been two and a half years without grants for MLAs: MP Basavaraj Bommai mocks

ಬೆಂಗಳೂರು: ಜನರು ಕೊಡುವ ದುಡ್ಡಿನಲ್ಲಿ ರಾಜ್ಯ ಸರ್ಕಾರ ತೀವ್ರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಅನುದಾನ ಇಲ್ಲದೇ ಎರಡೂವರೆ ವರ್ಷ ಆಯಿತು. ಜನ ಭ್ರಷ್ಟಾಚಾರಕ್ಕೆ ತಮ್ಮ ದುಡಿಮೆ ಹಣ ಕೊಡುವ ಸ್ಥಿತಿ ಬಂದಿದೆ. ರಾಜ್ಯದ ಜನರು ಕೊಡುವ ದುಡ್ಡಿನಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ.

ಬಡವರು ಕುಡಿಯುವ ಮದ್ಯಕ್ಕೂ ತೆರಿಗೆ ಹಾಕಿದ್ದಾರೆ. ಸಾಮಾನ್ಯವಾಗಿ ವಿರೋಧ ಪಕ್ಷದವರು ಪತ್ರ ಬರೆಯುತ್ತಾರೆ. ಹಗರಣಗಳ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ವಿಷಯವಾರು ಹೋರಾಟ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.

ಇನ್ನು ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಒಂದು ಶಕ್ತಿ ಇದ್ದಂತೆ. ಅವರು ಪ್ರವಾಸ ಮಾಡಿದಾಗಲೆಲ್ಲಾ ಒಂದು ಸ್ಪೂರ್ತಿ ಸಿಗುತ್ತೆ. ಈ ಬಾರಿ ಯಡಿಯೂರಪ್ಪ ಸ್ವಯಂ ಪ್ರೇರಿತರಾಗಿ ಪ್ರವಾಸ ಮಾಡುತ್ತಿದ್ದಾರೆ ಎಂದರು.

Tags:
error: Content is protected !!