ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಅವರು, ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕೆಲ ಸಮಯ ಅಲ್ಲೇ ಕುಳಿತು ಶಿವಣ್ಣ ಹಾಗೂ ಗೀತಾ ಅವರು ಪ್ರಾರ್ಥನೆ ಸಲ್ಲಿಸಿದರು.





