Mysore
21
clear sky

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಓದುಗರ ಪತ್ರ: ಪಡಿತರದ ಜೊತೆ ಇಂದಿರಾ ಕಿಟ್ ಒಳ್ಳೆಯ ನಿರ್ಧಾರ

ಓದುಗರ ಪತ್ರ

ಕುಟುಂಬ ಪಡಿತರ ಚೀಟಿದಾರರಿಗೆ ಪೌಷ್ಟಿಕ ವಸ್ತುಗಳೂ ಒಳಗೊಂಡ ‘ಇಂದಿರಾ ಆಹಾರ ಕಿಟ್’ ಅನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅನ್ನಭಾಗ್ಯ ಯೋಜನೆ ಅಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡುತ್ತಿರುವ ಐದು ಕೆಜಿ ಅಕ್ಕಿಗೆ ಪರ್ಯಾಯವಾಗಿ ಈ ಕಿಟ್ ನೀಡಲಾಗುವುದು ಎಂಬ ಪ್ರಸ್ತಾಪವನ್ನು ಆಹಾರ ಇಲಾಖೆ ಸಿದ್ಧಪಡಿಸಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಪಡಿತರ ಚೀಟಿದಾರರಿಗೆ ೫ ಕೆಜಿ ಅಕ್ಕಿಯ ಬದಲು ಗೋಧಿ, ಸಕ್ಕರೆ, ಉಪ್ಪು, ತೊಗರಿಬೇಳೆ, ಅಡುಗೆ ಎಣ್ಣೆ, ಚಹ ಪುಡಿ, ಕಾಫಿ ಪುಡಿಯನ್ನು ಒಳಗೊಂಡ ಇಂದಿರಾ ಆಹಾರ ಕಿಟ್ ವಿತರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಶ್ಲಾಘನೀಯ. ಇದರಿಂದ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟವಾಗುವುದನ್ನು ತಡೆಯಬಹುದಾಗಿದೆ.

– ಸಿದ್ದಲಿಂಗೇಗೌಡ ಹೈರಿಗೆ, ಎಚ್.ಡಿ.ಕೋಟೆ ತಾ

Tags:
error: Content is protected !!