Mysore
21
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಪ್ರಕಾಶ್‌ ರೈ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನೆ

Why isn't Prakash Rai protest in Andhra Pradesh and Tamil Nadu M.B. Patil questions

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಹೈಟೆಕ್‌ ಡಿಫೆನ್ಸ್‌ ಹಾಗೂ ಏರೋಸ್ಪೇಸ್‌ ಪಾರ್ಕಿಗಾಗಿ ಕೇವಲ 1282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ.

ಪಕ್ಕದ ರಾಜ್ಯ ಆಂಧ್ರಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೆ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ.

ಅಲ್ಲದೇ ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್‌, ಟಿಸಿಎಸ್‌ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಬಹುಭಾಷಾ ನಟ ಪ್ರಕಾಶ್‌ ರೈಗೆ ಇವೆಲ್ಲಾ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.

ನಟ ಪ್ರಕಾಶ್‌ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇವೆ. ರೈತ ಮುಖಂಡ ಬಯ್ಯಾರೆಡ್ಡಿ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್‌ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲಾ ಅರಿಯಬೇಕು ಎಂದು ನಟ ಪ್ರಕಾಶ್‌ ರೈ ವಿರುದ್ಧ ಕಿಡಿಕಾರಿದರು.

Tags:
error: Content is protected !!