Mysore
27
light rain

Social Media

ಶನಿವಾರ, 08 ಆಗಸ್ಟ್ 2026
Light
Dark

ಮೈಸೂರು ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ

Mysore Muda scam: High Court orders notice to Siddaramaiah's wife Parvathy

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ ಹೊರಡಿಸಿದೆ.

ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್‌ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಿಬಿಐ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದರು.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆಸಲಾಯಿತು.

ಇದುವರೆಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ನೋಟಿಸ್‌ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್‌ ಜಾರಿ ಮಾಡಿ ಎಂದು ಕೋರ್ಟ್‌ ಆದೇಶ ಹೊರಡಿಸಿದೆ.

ನೋಟಿಸ್‌ ಜಾರಿಯಾದ ಪ್ರತಿವಾದಿಗಳಿಗೆ ನೋಟಿಸ್‌ ನೀಡಲು ಸೂಚನೆ ನೀಡಿದ ಕೋರ್ಟ್‌ ವಿಚಾರಣೆಯನ್ನು ಸೆಪ್ಟೆಂಬರ್.‌4ಕ್ಕೆ ಮುಂದೂಡಿಕೆ ಮಾಡಿದೆ.

Tags:
error: Content is protected !!