Mysore
27
broken clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆ: ಸಚಿವ ಎಚ್‌ಸಿಎಂ ಆರೋಪ

h c mahadevappa reaction on nikhil kumaraswamy statement

ಮೈಸೂರು: ಶಿವಮೊಗ್ಗದ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಗಂದೂರು ಸೇತುವೆ ನಿರ್ಮಾಣ ನಮ್ಮ ಮೊದಲ ಅವಧಿಯ ಸರ್ಕಾರದ ಯೋಜನೆ. ಕಳೆದ 2013ರಲ್ಲಿ ನಾವೇ ಈ ಸೇತುವೆ ಯೋಜನೆಗೆ ಕಾರ್ಯಸೂಚಿ ಸಿದ್ಧ ಮಾಡಿದ್ದೆವು. ಒಟ್ಟಾರೆ ಪ್ಲಾನ್ ಕೂಡ ತಯಾರು ಮಾಡಿದ್ದೆವು. ಯಡಿಯೂರಪ್ಪ ಅವರೇ ನನಗೆ ಕರೆ ಮಾಡಿ ಮಹದೇವಣ್ಣ ಈ ಬ್ರಿಡ್ಜ್ ಮಾಡಿಕೊಡು ಎಂದು ಪ್ರೀತಿಯಿಂದ ಹೇಳಿದ್ದರು.

ಅಂದಿನ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಹ ಮಹದೇವಪ್ಪ ಈ ಬ್ರಿಡ್ಜ್ ಮಾಡು ಎಂದು ಹೇಳಿದ್ದರು. ಹೀಗಾಗಿ ಸೇತುವೆ ಕಾರ್ಯ ಯೋಜನೆ ಮಾಡಿದ್ದೇವೆ. ಯೋಜನೆಗೆ ಹಣ ಜಾಸ್ತಿಯಾದ ಕಾರಣ ಅದನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲಾಯಿತು. ನಾನು ಯಾವತ್ತು ಇದು ನಮ್ಮ ಯೋಜನೆ ಎಂದು ಹೇಳಿಕೊಂಡಿಲ್ಲ. ಬಿಜೆಪಿಯವರು ಹೇಳುತ್ತಿರುವುದಕ್ಕೆ ಇಂದು ನಾನು ಹೇಳಿದೆ ಅಷ್ಟೇ. ಇದು ಕಾಂಗ್ರೆಸ್ ಸರ್ಕಾರದ ಯೋಜನೆ ಅನ್ನುವುದರಲ್ಲಿ ಯಾವ ಅನುಮಾನಗಳು ಬೇಡ. ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಾಯಕರು ಅಲ್ಲಿ ಇದ್ದಿದ್ದರೇ ಅದರ ಬೆರಗು ಹೆಚ್ಚಾಗುತ್ತಿತ್ತು. ಮುಂದಿನ ದಿನಗಳಲ್ಲಿ ಈ ಸಂಘರ್ಷಕ್ಕೆ ಕೇಂದ್ರ ಅವಕಾಶ ಮಾಡಿಕೊಡಬಾರದು ಎಂದು ಸಲಹೆ ನೀಡಿದರು.

Tags:
error: Content is protected !!