Mysore
30
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಸಾಲಿಗ್ರಾಮ | ಆಕಸ್ಮಿಕ ಬೆಂಕಿಗೆ ಬ್ಯಾರನ್‌ ನಾಶ

Barn destroyed in accidental fire.

ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ.

ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ. ಈ ಸಂದರ್ಭದಲ್ಲಿ ಮನೆಯ ಚಾವಣಿ ಸೇರಿದಂತೆ ತಂಬಾಕು ಹದ ಮಾಡುವ ಮನೆಯ ಎಲ್ಲಾ ಪರಿಕರಗಳು ಕೂಡ ಸುಟ್ಟು ಹೋಗಿವೆ.

ತಕ್ಷಣ ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ಬೆಂಕಿ ನಂದಿಸಿದ್ದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ತಗುಲುವುದು ತಪ್ಪಿದೆ. ಬೆಂಕಿ ಅವಘಡದಿಂದ ೫-೬ ಲಕ್ಷ ರೂ. ನಷ್ಟವಾಗಿದೆ. ಆದ್ದರಿಂದ ನಮಗೆ ಪರಿಹಾರವನ್ನು ಕೊಡಬೇಕೆಂದು ನಷ್ಟಕ್ಕೆ ಒಳಗಾಗಿರುವ ರೈತ ರವಿ ಮನವಿ ಮಾಡಿದರು. ರೈತ ರವಿ ಅವರ ನೆರವಿಗೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಬರಬೇಕೆಂದು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ್ ಒತ್ತಾಯಿಸಿದ್ದಾರೆ.

Tags:
error: Content is protected !!