Mysore
25
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಗುಂಡ್ಲುಪೇಟೆ| ಕಾಡಂಚಿನ ಗ್ರಾಮಗಳಲ್ಲಿ ನಿಲ್ಲದ ಕಾಡು ಪ್ರಾಣಿಗಳ ಉಪಟಳ

elephant

ಗುಂಡ್ಲುಪೇಟೆ: ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು, ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ಅರಣ್ಯ ವಲಯದ ಆಸುಪಾಸಿನ ಗ್ರಾಮಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಡಂಚಿನ ಗ್ರಾಮಗಳಾದ ಮಂಚಹಳ್ಳಿ, ಆಲತ್ತೂರು, ಶಿವಕುಮಾರಪುರದಲ್ಲಿ ಆನೆಗಳು, ಕಾಡುಹಂದಿ ಹಾಗೂ ಜಿಂಕೆಗಳು ಭಾರೀ ಉಪಟಳ ನೀಡುತ್ತಿದ್ದು, ರೈತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕಾಡಂಚಿನಲ್ಲಿ ಸೋಲಾರ್‌ ಪೆನ್ಸ್‌ ಇದ್ದು ಇಲ್ಲದಂತಾಗಿದ್ದು, ಸಂಜೆಯ ವೇಳೆಗೆ ಕಾಡಾನೆಗಳು ಕಂದಕವನ್ನು ದಾಟಿ ರೈತರ ಜಮೀನುಗಳಿಗೆ ಲಗ್ಗೆ ಇಡುತ್ತಿವೆ. ಬೆಳೆ ರಕ್ಷಣೆಗೆಂದು ರೈತರು ಪ್ರಾಣವನ್ನೂ ಲೆಕ್ಕಿಸದೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟಲು ಸರ್ಕಾರ ಕ್ರಮ ವಹಿಸಬೇಕು ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.

Tags:
error: Content is protected !!