Mysore
26
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ

protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಸರ್ಕಾರಿ ನಿವೃತ್ತ ನೌಕರರು, ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಕರ ಸದನದಿಂದ ಪ್ರತಿಭಟನಾ ಜಾಥಾ ನಡೆಸಿದ ನಿವೃತ್ತ ನೌಕರರು, ಪಿಂಚಣಿಯನ್ನು ಯಥಾವತ್ತಾಗಿ ಮುಂದುವರಿಸಿ. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನೂರಾರು ನಿವೃತ್ತ ಶಿಕ್ಷಕರು ಭಾಗಿಯಾಗಿ, ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.

Tags:
error: Content is protected !!