Mysore
25
overcast clouds

Social Media

ಶನಿವಾರ, 25 ಜುಲೈ 2026
Light
Dark

ಕಾರ್ಗಿಲ್‌ ವಿಜಯ ದಿವಸ್‌ ಅಂಗವಾಗಿ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಪುತ್ಥಳಿಗೆ ಪುಷ್ಪಾರ್ಚನೆ

Yaduveer Wadiyar

ಮೈಸೂರು: ದೇಶಾದ್ಯಂತ 26ನೇ ವರ್ಷದ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ ಹಿನ್ನೆಲೆಯಲ್ಲಿಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಪೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಮೈಸೂರು ನಗರದ ಮೆಟ್ರೋಪೋಲ್ ಸರ್ಕಲ್ ಬಳಿಯಿರುವ ಪೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಪುತ್ಥಳಿಗೆ ಸಂಸದ ಯದುವೀರ್‌ ಒಡೆಯರ್‌ ಅವರು ಪುಷ್ಪಾರ್ಚನೆ ಸಲ್ಲಿಸಿ ನಮಿಸಿದರು. ಈ ವೇಳೆ ಕಾರ್ಯಕರ್ತರು ಭಾರತ್ ಮಾತಾಕಿ ಜೈ, ವಂದೇ ಮಾತರಂ ಎಂದು ಘೋಷಣೆ ಕೂಗಿದರು. ಈ ವೇಳೆ ಮಾಜಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Tags:
error: Content is protected !!