Mysore
25
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರಿನಲ್ಲಿ ಡ್ರಗ್ಸ್ ಜಾಲ : ಪೊಲೀಸರ ಲೋಪ ಗಂಭೀರ ವಿಷಯ : ಗೃಹ ಸಚಿವ

G Parameshwara

ಬೆಂಗಳೂರು : ಮುಂಬೈನಿಂದ ಮೈಸೂರಿಗೆ ಬಂದ ಮಹಾರಾಷ್ಟ್ರ ಪೊಲೀಸರು ಮಾದಕ ವಸ್ತುಗಳ ತಯಾರಿಕೆಯ ಸ್ಥಳವನ್ನು ಪತ್ತೆ ಹಚ್ಚುತ್ತಾರೆ ಎಂದರೆ, ನಮಲ್ಲಿ ಲೋಪ ಇರುವುದು ಎದ್ದು ಕಾಣುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಬರಬೇಕಿದೆ. ಆದರೆ ರಾಜಾರೋಷವಾಗಿ ಮಾದಕ ವಸ್ತುಗಳನ್ನು ತಯಾರಿಸಲಾಗುತ್ತಿತ್ತು ಎಂಬುದು ಆತಂಕದ ವಿಚಾರ. ಸ್ಥಳೀಯ ಪೊಲೀಸರಿಗೆ ಇದು ಗೊತ್ತಿಲ್ಲ ಎಂದರೆ ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು.

ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಗತ್ಯವಿರುವ ಸೂಕ್ತ ಕ್ರಮಗಳನ್ನು ಅವರು ತೆಗೆದುಕೊಳ್ಳುತ್ತಾರೆ ಎಂದರು.

ಬೆಂಗಳೂರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಲ್ಲು ಕ್ವಾರಿಗಳಲ್ಲಿ ಬಳಸಲು ಜಿಲೆಟಿನ್‌ಗಳನ್ನು ತರಲಾಗಿತ್ತು ಎಂಬ ಮಾಹಿತಿ ಇದೆ. ಆರೋಪಿ ಪೊಲೀಸರನ್ನು ಕಂಡ ತಕ್ಷಣ ಜಿಲೆಟಿನ್‌ಗಳನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದರು.

ಧರ್ಮಸ್ಥಳ ಭಾಗದಲ್ಲಿ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ. ಈ ಹಂತದಲ್ಲಿ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡುವುದಿಲ್ಲ. ತನಿಖೆ ವರದಿ ಸಲ್ಲಿಕೆಯಾದ ಬಳಿಕ ಅದರ ವಾಸ್ತವಾಂಶಗಳನ್ನು ಆಧರಿಸಿ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದರು.

ದಲಿತ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಬಗ್ಗೆ ಪ್ರತಿಕ್ರಿಯಿಸಲು ಪರಮೇಶ್ವರ್ ನಿರಾಕರಿಸಿದರು. ಶಾಸಕ ದೇವೇಂದ್ರಪ್ಪ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಲಿ ಎಂದಿದ್ದಾರೆ. ಈ ಬಗ್ಗೆ ನಾನು ಏನನ್ನು ಹೇಳಲು ಸಾಧ್ಯ? ಸದ್ಯ ಮಟ್ಟಿಗೆ ಈ ವಿಚಾರ ಚರ್ಚೆ ಮಾಡದಿರುವುದೇ ಸೂಕ್ತ ಎಂದರು.

Tags:
error: Content is protected !!