Mysore
23
broken clouds

Social Media

ಗುರುವಾರ, 30 ಏಪ್ರಿಲ 2026
Light
Dark

ಮತಗಳ್ಳತನ: ರಾಹುಲ್‌ ಗಾಂಧಿ ಬಳಿ ಸಾಕ್ಷಿ ಇವೆ ಎಂದ ಸಿಎಂ ಸಿದ್ದರಾಮಯ್ಯ

cm siddaramiha

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಕ್ಷಿ ಇರುವ ಹಿನ್ನೆಲೆಯಲ್ಲಿ ಆ.4ರಂದು ರಾಹುಲ್‌ ಗಾಂಧಿ ನಗರದಲ್ಲಿ ಪ್ರತಿಭಟನೆ ನಡೆಸಿದ ನಂತರ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಪ್ರತಿಭಟನೆಯನ್ನು ಯಾವ ರೀತಿ ಮಾಡಬೇಕು? ಎಲ್ಲಿ ಸೇರಬೇಕು ಎಂಬ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದರು.

ಇನ್ನು ಎಸ್‍ಐಟಿ ಮುಖ್ಯಸ್ಥರಾಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರು ಕೇಂದ್ರ ಸರ್ಕಾರದ ಸೇವೆಗೆ ಹೋದರೆ ಮಾತ್ರ ಬದಲಾವಣೆ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

Tags:
error: Content is protected !!