Mysore
24
light rain

Social Media

ಸೋಮವಾರ, 16 ಮಾರ್ಚ್ 2026
Light
Dark

ಓದುಗರ ಪತ್ರ: ಹದಗೆಟ್ಟ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಿ

ಓದುಗರ ಪತ್ರ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕು ವ್ಯಾಪ್ತಿಗೆ ಸೇರಿದ ನುಗು ಜಲಾಶಯದಿಂದ ಹೆಡಿಯಾಲ ಗ್ರಾಮದ ವರೆಗೂ ರಸ್ತೆ ಹಾಳಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗಿದೆ.

ಎಚ್.ಡಿ.ಕೋಟೆ ಹಾಗೂ ಸರಗೂರು ಕಡೆಯಿಂದ ನಂಜನಗೂಡು- ಹುರ-ಹುಲ್ಲಹಳ್ಳಿ- ಚಾಮರಾಜನಗರ ಮತ್ತಿತರ ಊರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ತೀರ ಹದಗೆಟ್ಟಿದೆ. ಬಡಗಲಪುರ, ಹಾದನೂರು, ಬೇಲದಕುಪ್ಪೆ ದೇವಸ್ಥಾನ ಹಾಗೂ ನುಗು ಜಲಾಶಯದ ಕಡೆಗೆ ಪ್ರತಿನಿತ್ಯ ಪ್ರವಾಸಿಗರು ಬರುತ್ತಾರೆ. ಆದರೆ ಈ ರಸ್ತೆಯಲ್ಲಿ ಪ್ರಯಾಣಿಸಬೇಕಾದರೆ ಹರಸಾಹಸಪಡಬೇಕಿದೆ.

ಮಳೆಗಾಲದಲ್ಲಿ ನುಗು ಜಲಾಶಯದ ಬಳಿ ಕೆಸರು ಗದ್ದೆಯಂತಾಗುತ್ತದೆ. ಇಲ್ಲಿ ವಾಹನ ಸವಾರರು ವಾಹನ ಚಾಲನೆ ಮಾಡಲು ಸರ್ಕಸ್ ಮಾಡುವಂತಾಗಿದೆ. ರಾತ್ರಿ ಸಮಯದಲ್ಲಂತೂ ಇಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕು. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು, ನಂಜನಗೂಡು ಹಾಗೂ ಎಚ್.ಡಿ.ಕೋಟೆ ಶಾಸಕರು ಹಾಗೂ ಚಾಮರಾಜನಗರ ಜಿಲ್ಲೆಯ ಸಂಸದರು ಕೂಡಲೆ ರಸ್ತೆ ದುರಸ್ತಿಗೆ ಕ್ರಮವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ.

-ಸಿದ್ದಲಿಂಗೇಗೌಡ. ಹೈರಿಗೆ, ಎಚ್.ಡಿ.ಕೋಟೆ ತಾಲ್ಲೂಕು

Tags:
error: Content is protected !!