Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಮಂಡ್ಯ | ಸೇತುವೆಗೆ ತೇಪೆ ಕೆಲಸ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ

Mandya | Villagers protest against patchwork on the bridge.

ಮಂಡ್ಯ : ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಸಮೀಪದ ಹಳೇ ಸೇತುವೆಯನ್ನು ಸಮರ್ಪಕವಾಗಿ ದುಸ್ಥಿಪಡಿಸದೆ, ತೇಪೆ ಹಾಕಿ ಕಳಪೆ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಮಂಡ್ಯ-ನಾಗಮಂಗಲ ರಸ್ತೆಯಲ್ಲಿರುವ ಎಚ್.ಕೋಡಿಹಳ್ಳಿ ಫಾರಂನ ತಿರುವಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿದೆ. ಹಿಂದೆ ಪೈಪ್‌ಗಳನ್ನು ಅಳವಡಿಸಿ ಸೇತುವೆ ನಿರ್ಮಿಸಿದ್ದು, ಇದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಸುತ್ತಮುತ್ತಲ ಗ್ರಾಮಸ್ಥರು, ರೈತರು ಪರದಾಡುವಂತಾಗಿದೆ ಎಂದು ದೂರಿದರು.

ಮಳೆಗಾಲದಲ್ಲಿ ಪೈಪ್‌ಗೆ ಅಡ್ಡಲಾಗಿ ಕಸ-ಕಡ್ಡಿಗಳು, ಮರದ ಕೊಂಬೆಗಳು ಹಾಗೂ ಇನ್ನಿತರೆ ವಸ್ತುಗಳು ಸಿಕ್ಕಿಹಾಕಿಕೊಂಡು ನೀರು ಸರಾಗವಾಗಿ ಹರಿಯದೆ ಸುತ್ತಮುತ್ತಲ ಜಮೀನುಗಳಿಗೆ ನುಗ್ಗುತ್ತದೆ. ಇದರಿಂದಾಗಿ ರೈತರು ಬೆಳೆದ ಬೆಳೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟವಾಗುತ್ತಿದೆ ಎಂದು ಕಿಡಿಕಾರಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿ ನಿರ್ವಹಣೆ ಸಂದರ್ಭದಲ್ಲಿ ಹಳೆಯ ಪೈಪ್‌ಗಳನ್ನು ತೆಗೆದು ಹೊಸದಾಗಿ ಸೇತುವೆಯನ್ನೇ ನಿರ್ಮಾಣ ಮಾಡಿ, ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ರೈತರೊಡಗೂಡಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡರಾದ ಮುರಳೀಧರ್, ಭಾನುಪ್ರಕಾಶ್, ಸೊಗಪ್ಪ, ವೆಂಕಟಪ್ಪ, ಪ್ರಕಾಶ, ಚೇತನ, ಚೆನ್ನೇಗೌಡ, ಶಿವಣ್ಣ, ಶ್ರೀಧರ, ಸುರೇಶ್, ವೆಂಕಟೇಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags:
error: Content is protected !!