Mysore
28
overcast clouds

Social Media

ಶನಿವಾರ, 16 ಮೇ 2026
Light
Dark

ಸಿಎಂ ಸಿದ್ದರಾಮಯ್ಯ ಸಭೆ ವಿಫಲ: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಫಿಕ್ಸ್

cm sidsdarmiah

ಬೆಂಗಳೂರು: ಸಾರಿಗೆ ಸಂಘಟನೆಗಳ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ವಿಫಲವಾಗಿದ್ದು, ನಾಳೆಯಿಂದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ವೇತನ ಹೆಚ್ಚಳ, ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದರು.

ಆದರೆ ಸಿಎಂ ಸಿದ್ದರಾಮಯ್ಯ ಅವರು ನೌಕರರ ಮನವೊಲಿಸುವ ಕೆಲಸ ಮಾಡಿದ್ದರು. ಆದರೆ ಸಾರಿಗೆ ಸಂಘಟನೆಗಳ ಮುಖಂಡರ ಜೊತೆ ನಡೆದ ಸಭೆ ವಿಫಲವಾಗಿದ್ದು, ಅನಿರ್ದಿಷ್ಟಾವಧಿ ಮುಷ್ಕರ ನಡೆಯೋದು ಫಿಕ್ಸ್‌ ಆಗಿದೆ.

38 ತಿಂಗಳ ಅರಿಯರ್ಸ್‌ ಹಣ ನೀಡಲು ಆಗಲಲ್‌ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇದರಿಂದ ಸಾರಿಗೆ ನೌಕರರು ನಾವು ಮುಷ್ಕರ ಮಾಡೇ ಮಾಡುತ್ತೇವೆ ಎಂದು ಹೇಳಿ ಸಭೆಯಿಂದ ಹೊರ ನಡೆದರು.

Tags:
error: Content is protected !!