Mysore
19
few clouds

Social Media

ಶನಿವಾರ, 07 ಫೆಬ್ರವರಿ 2026
Light
Dark

ಒಳ ಮೀಸಲಾತಿ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

cm siddaramiha

ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‍ದಾಸ್ ಅವರ ನೇತೃತ್ವದ ಅಯೋಗ ಇಂದು ತನ್ನ ವರದಿಯನ್ನು ಸಲ್ಲಿಸಿದ್ದು, ಆಗಸ್ಟ್ 7ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವರದಿ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾ. ನಾಗಮೋಹನ್‍ದಾಸ್ ಅವರ ಆಯೋಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ತಮನ್ನು ಭೇಟಿ ಮಾಡಿ ವರದಿ ಕೊಟ್ಟಿದ್ದಾರೆ. ಮುಂದಿನ ಸಚಿವ ಸಂಪುಟಸಭೆಯಲ್ಲಿ ಇದರ ಮಂಡನೆಯಾಗಲಿದೆ ಎಂದರು.

ಸಮೀಕ್ಷೆ ವರದಿ ವೈಜ್ಞಾನಿಕವಾಗಿ ನಡೆದಿಲ್ಲ ಎಂದು ಯಾರೂ ಹೇಳಿಲ್ಲ. ಅಂತಹ ಯಾವ ಟೀಕೆಗಳು ಇರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು, ಜು.1 ರಂದು ತಮ್ಮ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದ್ದು, ಮಾರ್ಚ್ 27ರಲ್ಲಿ ಮಧ್ಯಂತರ ವರದಿ ನೀಡಿದ ತಾವು ನಿಖರವಾದ ದತ್ತಾಂಶಗಳ ಕೊರತೆಯಿದೆ ಎಂದು ತಿಳಿಸಿದ್ದು, ಅದರಂತೆ ಹೊಸ ಸಮೀಕ್ಷೆಗೆ ಸಚಿವ ಸಂಪುಟಸಭೆ ಅನುಮತಿ ನೀಡಿತ್ತು ಎಂದರು.

ಮೇ 5ರಿಂದ 60 ದಿನಗಳ ಕಾಲ ಸಮೀಕ್ಷೆ ನಡೆಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಮೊಬೈಲ್ ಆ?ಯಪ್‍ನ್ನು ಬಳಸಿ 27 ಲಕ್ಷ ಕುಟುಂಬಗಳ 1.07ಕೋಟಿ ಜನರನ್ನು ಸಮೀಕ್ಷೆ ನಡೆಸಿದ್ದೇವೆ ಎಂದರು.

ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ದತ್ತಾಂಶ ಅನುಬಂಧ ಸೇರಿ 1766 ಪುಟಗಳ ವರದಿಯನ್ನು ಸಲ್ಲಿಸಿದ್ದೇವೆ. ಇನ್ನು ಮುಂದೆ ವರದಿ ಸರ್ಕಾರದ ಅಸ್ತಿಯಾಗಿದ್ದು ನನ್ನ ನಿಯಂತ್ರಣದಲ್ಲಿ ಇಲ್ಲ. ಯಾವುದೇ ವಿಚಾರಗಳಿದ್ದರೂ ಸರ್ಕಾರದ ಬಳಿಯೇ ಕೇಳಿ ಎಂದು ಹೇಳಿದರು.

Tags:
error: Content is protected !!