Mysore
29
light rain

Social Media

ಶುಕ್ರವಾರ, 31 ಜುಲೈ 2026
Light
Dark

ಓದುಗರ ಪತ್ರ: ನ್ಯಾಯಾಂಗ ವ್ಯವಸ್ಥೆಯ ಮೇಲೆ ಹೆಚ್ಚಿದ ನಂಬಿಕೆ

ಓದುಗರ ಪತ್ರ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಸಾರ್ವಜನಿಕರು ನ್ಯಾಯಾಂಗದ ಮೇಲೆ ಹೆಚ್ಚು ನಂಬಿಕೆ ಇಡುವಂತೆ ಮಾಡಿದೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ, ನ್ಯಾಯ ಎಲ್ಲರಿಗೂ ಒಂದೇ ಎಂದು ಈ ಪ್ರಕರಣದಿಂದ ಸಾಬೀತಾ ದಂತಾಗಿದೆ.

ದಕ್ಷ ಪೊಲೀಸ್ ಅಧಿಕಾರಿಗಳು ಪ್ರಾಮಾಣಿಕವಾಗಿ ತನಿಖೆ ನಡೆಸಿದ್ದರಿಂದ ಆರೋಪಿಗೆ ಜೀವಾವಧಿ ಜೈಲು ಶಿಕ್ಷೆಯಾಗಿದೆ. ಇದು ಸತ್ಯಕ್ಕೆ ಮತ್ತು ನ್ಯಾಯಕ್ಕೆ ದೊರೆತ ಜಯ. ನ್ಯಾಯಾಲಯ ನೀಡಿರುವ ತೀರ್ಪು ಅತ್ಯಾಚಾರಿಗಳಿಗೆ ಪಾಠವಾಗಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

Tags:
error: Content is protected !!