Mysore
20
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ ಹಾಗೂ ಮಾವುತರಿಗೆ ಆರ್ಥಿಕ ಭದ್ರತೆ

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಗಜಪಡೆ, ಮಾವುತರು ಹಾಗೂ ಕಾವಾಡಿಗರ ಜೊತೆಗೆ ಅರಣ್ಯಾಧಿಕಾರಿಗಳನ್ನು ಒಳಗೊಂಡಂತೆ ಅರಣ್ಯ ಇಲಾಖೆಯಿಂದ 2.04 ಕೋಟಿ ರೂಪಾಯಿ ವಿಮೆ ಮಾಡಿಸುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ 14 ಆನೆಗಳು, ಅವುಗಳ ಮಾವುತರು ಮತ್ತು ಕಾವಾಡಿಗರು ತಲಾ 14 ಮಂದಿ, ಅರಣ್ಯ ಸಿಬ್ಬಂದಿ ಸೇರಿದಂತೆ ಒಟ್ಟು 43 ಜನರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

ಗಜಪಯಣದಿಂದ ಜಂಬೂಸವಾರಿ ಪೂರ್ಣಗೊಳಿಸಿ ಮತ್ತೆ ಕಾಡಿಗೆ ತೆರಳುವವರೆಗೆ ವಿಮೆ ಸೌಲಭ್ಯ ಜಾರಿಯಲ್ಲಿರುತ್ತದೆ. ಇದಕ್ಕಾಗಿ ಜಿಲ್ಲಾಡಳಿತ ವತಿಯಿಂದ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿಗೆ 67,000 ರೂ ಪ್ರೀಮಿಯಂ ಪಾವತಿಸಲಾಗಿದೆ.

ಅಂಬಾರಿ ಹೊರುವ ಕ್ಯಾಪ್ಟನ್‌ ಅಭಿಮನ್ಯು ಸೇರಿದಂತೆ ಎಲ್ಲಾ ಗಂಡಾನೆಗಳಿಗೆ ಒಟ್ಟು 50 ಲಕ್ಷ ವಿಮೆ ಮಾಡಿಸಲಾಗಿದ್ದು, ಹೆಣ್ಣಾನೆಗಳಿಗೆ 18 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.

ಸಿಬ್ಬಂದಿ, ಕಾವಾಡಿಗರು, ಮಾವುತರು, ವಿಶೇಷ ಮಾವುತರು, ಸಹಾಯಕರು, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯ ಅಧಿಕಾರಿ, ಪಶುವೈದ್ಯಾಧಿಕಾರಿ, ಸಹಾಯಕರು ಸೇರಿದಂತೆ ಒಟ್ಟು 43 ಮಂದಿಗೆ 86 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.

ಇನ್ನು ದಸರಾ ಆನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ದಸರಾ ಆನೆಗಳಿಂದ ನಷ್ಟವಾದರೂ ಇದಕ್ಕೆ 50 ಲಕ್ಷ ರೂ ವಿಮೆ ಪರಿಹಾರ ಸಿಗಲಿದೆ.

Tags:
error: Content is protected !!